NEWS

ಬೂದನೂರು ಉತ್ಸವ 2026 ರಲ್ಲಿ ಹೆಲಿ ಟೂರಿಸಂ ಆಯೋಜನೆ ಮಾಡುವ ಪ್ರಯುಕ್ತ ಸ್ಥಳ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ: ಫೆಬ್ರವರಿ 21,22 ರಂದು ನಡೆಯಲಿರುವ ಬೂದನೂರು ಉತ್ಸವ 2026 ರಲ್ಲಿ ಸದರಿ ವರ್ಷ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದೆ.

ಫೆಬ್ರವರಿ 20 ರಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ಬೂದನೂರಿನಲ್ಲಿ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಹೆಲಿಕಾಪ್ಟರ್ ಮೂಲಕ ಬೂದನೂರು ಉತ್ಸವವನ್ನು ಕಣ್ತುಂಬಿಕೊಳ್ಳಬಹುದು ಈ ನಿಟ್ಟಿನಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಇಂದು ಬೂದನೂರಿನ ಅಮರಾವತಿ ಬಳಿ ಹೆಲಿಕಾಪ್ಟರ್ ನಿಲ್ಲುವ ಸ್ಥಳವನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯ ನೇಮಕಾತಿ

ಇರಾನ್‌ನ ನಾಯಕ ಅಯತ್ತೊಲ್ಲಾ ಅಲಿ ಖಮೇನಿ ಸಾವಿಗೆ ಭಾರತ ಸಂತಾಪ

ಭಾರತದ ಅತಿದೊಡ್ಡ ಉಚಿತ ಗ್ರಂಥಾಲಯ: ಅಂಕೇಗೌಡ

Leave a Comment