ಪಾಲನೆ ನ್ಯೂಸ್

ಬೆಂಗಳೂರು: ಗರ್ಭದಲ್ಲಿ ಹೆಣ್ಣು ಭ್ರೂಣವಿರುವುದು ತಿಳಿದ ಕೂಡಲೇ ಕ್ರೂರವಾಗಿ ಕೊಲ್ಲುತ್ತಿರುವ ಪ್ರಕರ ಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ನಿಕೃಷ್ಟ ಪದ್ಧತಿ ಸಂಪೂರ್ಣ ವಾಗಿ ನಿಲ್ಲಬೇಕಿದೆ ಎಂದು ಅಭಿಪ್ರಾಯ ಪಟ್ಟಿದೆ.
ಹೆಣ್ಣು ಭ್ರೂಣದ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಈ ಸಂಬಂಧ ನಗರದ 46ನೇ ಎಸಿ ಜೆಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಚನ್ನಪಟ್ಟಣ ತಾಲೂಕು ಮಾಲೂರಿನ ಶಾರದಮ್ಮ (48) ಅವರ ಪತಿ ದಾಸೇಗೌಡ (60) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
