NEWS

ಹೆಡ್‌ಮಾಸ್ಟರ್ ಅಮಾನತು

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಮುಖ್ಯಶಿಕ್ಷಕ!

ಪಾಲನೆ ನ್ಯೂಸ್

ಬೆಳ್ತಂಗಡಿ : ಪಿಕಪ್‌ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳ ನ್ನು ಕುರಿಗಳಂತೆ ತುಂಬಿಕೊಂಡು ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.‌

ಫೆ.9ರಂದು ಪಿಕಪ್ ಮತ್ತು ಟಿಪ್ಪರ್‌ ವಾಹನಗಳಿಗೆ 3 ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಬಳಂಜ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಸಮೀಪದ ಫಾರ್ಮ್‌ಗೆ ಕರೆದುಕೊಂಡು ಹೋಗಲಾಗಿತ್ತು. ಪ್ರವಾಸದ ವಿಡಿಯೋ ವೈರಲ್ ಆದ ಬಳಿಕ ಮಂಗಳೂರು ಡಿಡಿಪಿಐ ಮುಖ್ಯಶಿಕ್ಷಕನನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಭಗೀರಥರ ಚಿಂತನೆ, ಸಾಧನೆಯನ್ನು ಮಕ್ಕಳಗೆ ತಿಳಿಸುವ ಕೆಲಸವಾಗಬೇಕು

ವಕೀಲೆ ಆದ ದೀದಿ!

“ಕಾಡ್ಡಿಚ್ಚಿನಿಂದ ವನ್ಯಜೀವಿಗಳು, ಅರಣ್ಯ ನಾಶ’ ವಾಗುತ್ತದೆ.

Leave a Comment