NEWS

ಫೆ. 16 ಮತ್ತು 17ರಂದು ಗಾಂಧಿ ಗ್ರಾಮ ಭಾರತ ಮರಳಿಹಳ್ಳಿಗೆ ಗಾಂಧೀಜಿ ಮತ್ತು ಗ್ರಾಮಸ್ವರಾಜ್ ಕುರಿತು ಚಿಂತನ -ಮಂಥನ ಕಾರ್ಯಕ್ರಮ

ಪಾಲನೆ ನ್ಯೂಸ್

ಮಂಡ್ಯ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಹೊರಾವರಣ ಸ್ನಾತಕೋತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಬಿ. ಹೊಸೂರು ಕಾಲೋನಿ, ಮಂಡ್ಯ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು ಹಾಗೂ ಗ್ರಾಮ ಪಂಚಾಯಿತಿ ಬಿ .ಹೊಸೂರು ಇವರ ಸಹಯೋಗದೊಂದಿಗೆ ಗಾಂಧಿ ಗ್ರಾಮ ಭಾರತ “ಮರಳಿ ಹಳ್ಳಿಗೆ” ಗಾಂಧೀಜಿ ಮತ್ತು ಗ್ರಾಮಸ್ವರಾಜ್ ಕುರಿತ ಚಿಂತನ- ಮಂಥನ ಕಾರ್ಯಕ್ರಮವನ್ನು ಫೆಬ್ರವರಿ 16 ಹಾಗೂ ಫೆಬ್ರವರಿ 17ರಂದು ನೂತನ ಗಾಂಧಿ ಭವನ ಬಿ .ಹೊಸೂರು ಕಾಲೋನಿ (ಕೇಂದ್ರೀಯ ವಿದ್ಯಾಲಯದ ಹಿಂಭಾಗ), ಮಂಡ್ಯ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ವಿಧಾನಸಭಾ ಶಾಸಕರು ಪಿ .ರವಿಕುಮಾರ್ ಗೌಡರವರು ವಹಿಸಲಿದ್ದಾರೆ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರು ನಾಡೋಜ ಡಾ. ವೂಡೇ ಪಿ. ಕೃಷ್ಣ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರೊ. ವಿಜಯಾ ಬಿ .ಕೋರಿಶೆಟ್ಟಿ, ಜಿಲ್ಲಾಧಿಕಾರಿಗಳು ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಡಾ. ಶೋಭರಾಣಿ ವಿ .ಜೆ, ಕರ್ನಾಟಕ ಸಂಘದ ಅಧ್ಯಕ್ಷರು ಪ್ರೊ. ಜೈಪ್ರಕಾಶಗೌಡ ರವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ದಿಕ್ಸೂಚಿ ನುಡಿಯನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರು ಪ್ರೊ. ನಟರಾಜ್ ಬೂದಾಳು ರವರು ನುಡಿಯಲಿದ್ದಾರೆ.

ಸಮಾರೋಪ ಸಮಾರಂಭ:

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಅನುಭವ ಹಂಚಿಕೆ.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಅಧ್ಯಕ್ಷರು ಪ್ರೊ. ಜೈಪ್ರಕಾಶಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕದಲ್ಲಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಹರೀಶ್ ಟಿ.ಕೆ, ಬಿ.ಹೊಸೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಹೇಶ್ ಎನ್ .ಹೆಚ್ ರವರುಗಳು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೊರಾವರಣ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿಗಳು ಪ್ರೊಫೆಸರ್ ವಿಷ್ಣು ಎಂ. ಶಿಂದೆ ರವರು ವಹಿಸಲಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಚಿರತೆ ದಾಳಿಯಿಂದ ಮೃತಪಟ್ಟ ಯುವಕನ ನಿವಾಸಕ್ಕೆ ಮಾಜಿ ಶಾಸಕ: ರವೀಂದ್ರ ಶ್ರೀಕಂಠಯ್ಯ ಭೇಟಿ

ಎಲ್ಲರ ಸಹಕಾರದಲ್ಲಿ ಕ.ಸಾ.ಪ. ಕಾರ್ಯಕ್ರಮ : ಕೆ.ಟಿ. ಹನುಮಂತು

ಯುವ ಜನತೆಯೂ ಡಾ. ರಾಜ್ ಕುಮಾರ್ ರವರ ಸರಳ ಜೀವನ ಶೈಲಿ ಹಾಗೂ ಅವರ ನೈತಿಕ ಮೌಲ್ಯಗಳನ್ನು ಅಳವಡಿಸಿ ಕೊಳ್ಳಿ : ಬಿ. ಪಿ. ಪ್ರಕಾಶ್

Leave a Comment