ಮಂಡ್ಯ: ಪಾಂಡವಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ 7 ತಾಲ್ಲೂಕುಗಳ ವಕೀಲರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ದಿನಾಂಕ 12.02.2026 ರಂದು ಸಭೆ ನಡೆಸಲಾಗಿತ್ತು.

ಈ ಸಂಬಂಧ ಇಂದು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಪ್ರಕರಣಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದ ಅಗತ್ಯ ಕ್ರಮಗಳ ಕುರಿತು ಮಾನ್ಯ ಜಿಲ್ಲಾಧಿಕಾರಿಗಳು ಸೂಕ್ತ ನಿರ್ದೇಶನಗಳನ್ನು ನೀಡಿದರು. ಜೊತೆಗೆ, ನ್ಯಾಯಾಲಯದ ಆದೇಶಗಳನ್ನು ಹೊರಡಿಸುವ ಸಂದರ್ಭದಲ್ಲಿ ಪ್ರಚಲಿತ ನಿಯಮಾವಳಿ, ನಿಗದಿತ ವಿಧಾನಗಳು ಹಾಗೂ ನ್ಯಾಯಾಲಯದ ಶಿಷ್ಟಾಚಾರದಂತೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಸ್ಪಷ್ಟವಾಗಿ ಸೂಚಿಸಲಾಯಿತು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

