ಪಾಲನೆ ನ್ಯೂಸ್
ನವದೆಹಲಿ: ಒಂದು ದೇಶ ಒಂದು ಪಡಿತರ ಚೀಟಿ ರೀತಿಯಲ್ಲೇ ‘ಒಂದು ದೇಶ ಒಂದು ಮತಪಟ್ಟಿ’ ಪರಿಕಲ್ಪನೆ ಜಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದೆಹಲಿಯಲ್ಲಿ ಆಯೋಜಿಸಿರುವ ರಾಜ್ಯ ಚುನಾವಣಾ ಆಯುಕ್ತರ ರಾಷ್ಟ್ರೀಯ ದುಂಡುಮೇಜಿನ ಸಮ್ಮೇಳನದಲ್ಲಿ ಈ ವಿಚಾರವಾಗಿ ಒಂದು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಚುನಾವಣೆ ಗಳಲ್ಲಿ ಪಾರದರ್ಶಕತೆ ಮತ್ತು ಏಕರೂಪತೆ ತರುವುದು ಸಮ್ಮೇಳನದ ಅಜೆಂಡಾ ಆಗಿದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ಆಯುಕ್ತರು ಭಾಗವಹಿಸಲಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

