ಪಾಲನೆ ನ್ಯೂಸ್

ಬೆಂಗಳೂರು: ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸೋಮವಾರ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರ ಆರಂಭಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆ ಯಲ್ಲಿ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು 15,000 ರೂ. ಹಾಗೂ ಸಹಾಯಕಿಯರ ಗೌರವ ಧನವನ್ನು 10,000 ರೂ. ಗಳಿಗೆ ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. 4 ಪ್ರಮುಖ ಬೇಡಿಕೆಗಳು ಕಾರ್ಯಕರ್ತೆಯರ ಗೌರವ ಧನ 15,000 ರೂ.ಗೆ ಹೆಚ್ಚಿಸಬೇಕು ಸಹಾಯಕಿಯರ ಗೌರವ ಧನ 10,000 ರೂ.ಗಳಿಗೆ ಹೆಚ್ಚಿಸಬೇಕು ನಿವೃತ್ತಿ ಹೊಂದಿದವರಿಗೆ ಗ್ರಾಚ್ಯುಟಿ ನೀಡಬೇಕು ಉಚಿತ ವೈದ್ಯಕೀಯ ಸೌಲಭ್ಯ, ಮಾಸಿಕ ಭತ್ಯೆ ಹೆಚ್ಚಳ ಮಾಡಬೇಕು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

