NEWS

ಸಾಮರಸ್ಯ ಮತ್ತು ಸಮಾನತೆ ಭಾವನೆಯ ಮೂಲಕ ಮಾದರಿ ಸಮಾಜ ನಿರ್ಮಾಣ ಮಾಡೋಣ – ಎನ್. ಚಲುವರಾಯಸ್ವಾಮಿ

ಪಾಲನೆ ನ್ಯೂಸ್

ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ ನಿರ್ಮಾಣ ಮಾಡೋಣ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ರವರು ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡ್ಯ ಜಿಲ್ಲಾ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ವಿಚಾರಗೋಷ್ಠಿ ಮತ್ತು ಕಾರ್ಯಗಾರವನ್ನು ಜಿಲ್ಲಾ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ದೀಪ ಬೆಳಗಿಸಿ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾನವಕುಲ ಒಂದೇ, ಜಾತಿ ಎಂಬುದು ಹಳೆಯ ಕಾಲದಿಂದಲೂ ಬಂದಿದೆ. ಇಂದಿಗೂ ನಾವು ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಬಗ್ಗೆ ಮಾತನಾಡುತ್ತೇವೆ ಎಂದರೆ ಬೇಸರದ ಸಂಗತಿ. ಒಂದೆರಡು ಕಡೆ ದೌರ್ಜನ್ಯ ಪ್ರಕರಣ ಕಂಡುಬರುತ್ತಿದೆ ಅದು ಕೂಡ ತಲೆ ತಗ್ಗಿಸುವ ಕೆಲಸವಾಗಿದೆ ಎಂದು ಹೇಳಿದರು.

ರಾಜ್ಯದಲ್ಲೇ ನಮ್ಮ ಜಿಲ್ಲೆ ದೌರ್ಜನ್ಯ ಮುಕ್ತ ಆಗಬಹುದು. ದೌರ್ಜನ್ಯ ಪ್ರಕರಣದಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗಿದ್ದು ರಾಜಿಯಲ್ಲೇ ಅದು ಬಗೆ ಹರಿದಿದೆ. ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯಗಳ ಕಾಯ್ದೆಯು ಜಾರಿಯಲ್ಲಿರುವುದು ಕೇವಲ (ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ )ಮೂರು ರಾಜ್ಯದಲ್ಲಿ ಮಾತ್ರ. ಅದರಲ್ಲೂ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯು ಅಸ್ತಿತ್ವದಲ್ಲಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕಾಗಿ 40 ರಿಂದ 50 ಕೋಟಿ ಹಣ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ಮುಕ್ತಗೊಳಿಸಿ ಕಾನೂನು ದುರ್ಬಳಕೆ ಆಗದಂತೆ ಮತ್ತು ಜಿಲ್ಲೆಯಲ್ಲಿ ದೌರ್ಜನ್ಯಗಳು ಆಗದಂತೆ ಅಧಿಕಾರಿಗಳು ಕ್ರಮ ವಹಿಸಿಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣವನ್ನು ತಕ್ಷಣದಲ್ಲಿ ಬಗೆಹರಿಸುವ ಸಲುವಾಗಿ ಹಾಗೂ ವಿಲೇವಾರಿ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ. ಮಂಡ್ಯ ಜಿಲ್ಲೆಯಲ್ಲಿ ವರ್ಷದಲ್ಲಿ 50ರಿಂದ 60 ದೌರ್ಜನ್ಯ ಪ್ರಕರಣ ದಾಖಲಾಗುತ್ತಿದೆ. ಕಳೆದ 10 ವರ್ಷದಲ್ಲಿ 850 ಪ್ರಕರಣ ದಾಖಲಾಗಿದ್ದು 12 ಕೋಟಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಇದುವರೆಗೂ 37ಪ್ರಕರಣ ಅಂತಿಮ ತೀರ್ಪು ಪಡೆದಿದ್ದು ಶೇ. 5 ರಷ್ಟು ಪ್ರಮಾಣದಲ್ಲಿ ಶಿಕ್ಷೆಯಾಗಿದೆ. ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ 33 ಪ್ರತ್ಯೇಕವಾಗಿ ಪೊಲೀಸ್ ಠಾಣೆಯನ್ನು ತೆರೆದಿದೆ. ಇದರಿಂದ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಲವು ಸಭೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್. ಬಾಬು ಜಗಜೀವನ್ ರಾಮ್ ಸಮಾನತೆಯ ಸಂದೇಶವನ್ನು ಸಾರಿದ ಇಬ್ಬರು ಆದರ್ಶನೀಯರ ಗುಣವನ್ನು ಮೈಗೂಡಿಸಿಕೊಂಡು ಹೋಗಬೇಕು. ಮಾನವೀಯತೆ,ಅಂತಕರಣ, ವೈಜ್ಞಾನಿಕ ಮನೋಭಾವ ದಿಂದ ಅಸ್ಪೃಶ್ಯತೆಯನ್ನು ಹೋಗಲಾಡಿಸಬಹುದು ಸಂವಿಧಾನದ ಮಹತ್ವವನ್ನು ಅರಿತು ನಡೆಯಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಆರ್. ನಂದಿನಿ ಸಂವಿಧಾನ ಪೀಠಿಕೆ ಭೋಧನೆ ಮಾಡಿದರು.

ವೇದಿಕೆಯಲ್ಲಿ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ. ರವಿಕುಮಾರ್. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಸತ್ಯಕೀರ್ತಿ ಮಹಾಸ್ವಾಮೀಜಿ, ಚಿತ್ರದುರ್ಗದ ಶ್ರೀ ಶಿವಶರಣ ಮಾದರಚನ್ನಯ್ಯ ಸ್ವಾಮೀಜಿ, ಕೋಡ್ನ ಶ್ರೀ ಉರಿಲಿಂಗ ಪೆದ್ದಿಶ್ವರ ಮಹಾಸಂಸ್ಥಾನ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಡಾ. ವಿ. ಜೆ. ಶೋಭಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶ ಎಂ. ಆನಂದ್, ಮೈಶುಗರ್ ಅಧ್ಯಕ್ಷ ಸಿ. ಡಿ ಗಂಗಾಧರ್, ಮೂಡ ಅಧ್ಯಕ್ಷ ಬಿ. ಪಿ. ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಪ್ರೌಢಶಾಲಾ ಸಹಶಿಕ್ಷಕರ ಸಂಘದ 2026 ನೇ ವರ್ಷದ ದಿನದರ್ಶಿಕೆ ಬಿಡುಗಡೆ

ನಕಲಿ ಗನ್ ಇಟ್ಟು ಕೊಂಡು ಪ್ರಾಂಕ್ ಮಾಡಿದವನು ಪೊಲೀಸರ ಅತಿಥಿಯಾಗಿದ್ದಾನೆ

ಕೆಡಿ ಚಿತ್ರದ ಹಾಡು ಡಿಲೀಟ್

Leave a Comment