ಕ.ರಾ.ರ.ಸಾ.ನಿಗಮದಿಂದ ಮಂಡ್ಯ ವಿಭಾಗದವತಿಯಿಂದ 140 ಬಸ್ ಗಳ ಕಾರ್ಯಾಚರಣೆ
ಪಾಲನೆ ನ್ಯೂಸ್

ಮಂಡ್ಯ: ಶ್ರೀ ಮೇಲುಕೋಟೆ ವೈರಮುಡಿ ಜಾತ್ರಾ ಮಹಾ ರಥೋತ್ಸವವು ಮಾರ್ಚ್ 28 ರಂದು ನಡೆಯಲಿದ್ದು, ಸದರಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮದ. ಮಂಡ್ಯ ವಿಭಾಗದವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ. ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು. ಹಾಸನ, ತುಮಕೂರು ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್ಸುಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
