ಪಾಲನೆ ನ್ಯೂಸ್

ಶ್ರೀರಂಗಪಟ್ಟಣ: ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಶ್ರೀಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ಜರುಗಿತು. ಕಳೆದ ನಾಲ್ಕು ದಿನಗಳಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದ್ದವು. ಗುರುವಾರ ಬೆಳಿಗ್ಗೆ 10 ಗಂಟೆಗೆ ಗ್ರಾಮದ ಕಲ್ಯಾಣಿಯಿಂದ ಮಡಿತೇರನ್ನು ” ಎಳೆದು ತರಲಾಯಿತು.ಸಂಜೆ 6 ಗಂಟೆಗೆ ಅಕ್ಕ ಪಕ್ಕದ ಹಳ್ಳಿಗಳಿಂದ ಬಂದಿದ್ದ ಭಕ್ತಾದಿಗಳು ವಿವಿಧ ಹೂಗಳಿಂದ ಅಲಂಕಾರಗೊಂಡಿದ್ದ ತೇರನ್ನು ದೇವಸ್ಥಾನದ ಸುತ್ತ ಎಳೆದು ರಥೋತ್ಸವವನ್ನು ಯಶಸಿಗೊಳಿಸಿದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
