Uncategorized

ಹಿರಿಯ ಸ್ವಾತಂತ್ರ್ಯ ಸೇನಾನಿ ಕೆ.ಚನ್ನೇಗೌಡ(ಮೂರ್ಬೆಳೆ) ನಿಧನ

ಪಾಲನೆ ನ್ಯೂಸ್
ಮಂಡ್ಯ: ಕೀಲಾರ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ.ಚನ್ನೇಗೌಡ(ಮೂರ್ಬೆಳೆ) ಅವರು ಇಂದು ನಿಧನರಾಗಿದ್ದಾರೆ.
ಇವರ ಅಂತ್ಯಕ್ರಿಯೆ ಮಧ್ಯಾಹ್ನ 2ಗಂಟೆಗೆ ಕೀಲಾರದಲ್ಲಿ ನಡೆಯಲಿದೆ.


ಚನ್ನೇಗೌಡರು 98 ವರ್ಷ ಪೂರೈಸಿ 99ನೇ ವರ್ಷಕ್ಕೆ ಕಾಲಿಟ್ಟಿದ್ದರು. ಅಪಾರ ಸಂಖ್ಯೆಯ ಬಂಧುಗಳು, ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಇದ್ದಾರೆ.ಕೀಲಾರದ ಹಿರಿಯರು ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಗಾಂಧೀಜಿಯವರ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಕೆ.ವಿ.ಶಂಕರಗೌಡರು ಸ್ಥಾಪಿಸಿದ್ದ ರೈತರ ಸೊಸೈಟಿಯಲ್ಲಿ ಕೆಲಸ ಮಾಡಿ ನಿವೃತ್ತಿಯ ನಂತರ ಕೀಲಾರದಲ್ಲಿ ತುಂಬು ಕುಟುಂಬದೊಂದಿಗೆ ನೆಲೆಸಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನಗರಸಭೆ ಒಳಚರಂಡಿಯ ಕೊಳಚೆ ನೀರು ಕೆರೆಗೆ ಸೇರಿ ಸಾವಿರಾರು ಮೀನುಗಳು ಮೃತ

ಕೃಷ್ಣಪ್ಪ, ಪ್ರಿಯಾಕೃಷ್ಣ ಮೇಲೆ FIR

ಎಸ್.ಎಂ.ಕೃಷ್ಣರಂತಹ ಸುಸಂಸ್ಕೃತ ಮುಖ್ಯಮಂತ್ರಿಯನ್ನು ನಾನು ಕಂಡಿಲ್ಲ : ಶ್ರೀನಿವಾಸ ಜಿ.ಕಪ್ಪಣ್ಣ

Leave a Comment