ಪಾಲನೆ ನ್ಯೂಸ್
ಮಂಡ್ಯ : 2026ರ ಏಪ್ರಿಲ್ನಿಂದ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯದ ಅಂಗವಾಗಿ, ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಮಂಡ್ಯ ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿ, ಜನ ಗಣತಿ ಪ್ರಗತಿಯನ್ನು ಪರಿಶೀಲಿಸಿದರು.

ಜನಗಣತಿ ಪ್ರಕ್ರಿಯೆಯು ನಿಖರ ಮತ್ತು ಸುಗಮವಾಗಿ ನಡೆಯಲು ಜನಗಣತಿದಾರರು ಮನೆ ಮನೆಗೆ ಭೇಟಿ ನೀಡಿದ್ದಾಗ ಸಾರ್ವಜನಿಕರು ನಿಖರವಾದ ಮಾಹಿತಿ ನೀಡಿ ಸಹಕರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಂಡ್ಯ ಉಪ ವಿಭಾಗಧಿಕಾರಿ ಎಂ. ಶಿವಮೂರ್ತಿ, ನಗರಸಭೆ ಆಯುಕ್ತೆ ಪಂಪಾಶ್ರೀ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
