NEWS

ವಿವಿಧ ಇಲಾಖೆಗಳ ಹುದ್ದೆಗಳಿಗೆ ಶೇ.17ರಿಂದ ಶೇ.15ಕ್ಕೆ ಸೀಮಿತಗೊಳಿಸಲಾಗಿದೆ

ಪಾಲನೆ ನ್ಯೂಸ್

ಬೆಂಗಳೂರು: ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಯನ್ನು ಶೇ.17ರಿಂದ ಶೇ.15ಕ್ಕೆ ಸೀಮಿತಗೊಳಿಸಿ ಒಳಮೀಸಲಾತಿ ಜಾರಿಗೊಳಿಸಲಾಗಿದೆ.

ಮಂಗಳವಾರ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ ಪರಿಶಿಷ್ಟ ಜಾತಿಗಳಿಗೆ ಈವರೆಗೂ ನೀಡಲಾಗುತ್ತಿದ್ದ ಮೀಸಲಾತಿ ಪ್ರಮಾಣವನ್ನು ಪರಿಷ್ಕರಣೆ ಮಾಡಿದ್ದು, ಇದು ಅಂತಿಮವಾಗಿ ತೀರ್ಪಿಗೆ ಹೈಕೋರ್ಟ್‌ನ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಆದೇಶದ ಪ್ರತಿಯನ್ನು ರಾಜ್ಯದ ಎಲ್ಲ ಉದ್ಯೋಗಾ ಕಾಂಕ್ಷಿಗಳೊಂದಿಗೆ ಹಂಚಿಕೊಳ್ಳಲು ನನಗೆ ಅತೀವ ಸಂತೋಷವಾಗುತ್ತಿದೆ. ನಮ್ಮ ಸರ್ಕಾರವು ಒಳಮೀಸ ಲಾತಿ ವಿಚಾರದಲ್ಲಿ ನುಡಿದಂತೆ ನಡೆದಿದ್ದು, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ತತ್ವದೆಡೆಗಿನ ತನ್ನ ಬದ್ಧತೆಯನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಜನತೆಯ ವಿಶ್ವಾಸಕ್ಕೆ ಮುಕ್ಕಾಗದಂತೆ ನಡೆದುಕೊಂಡಿದೆ. -ಸಿದ್ದರಾಮಯ್ಯ, ಸಿಎಂ

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn


Related posts

ಕಾಡಾನೆಗಳ ದಾಳಿಗೆ ಬೆಳೆ ಹಾನಿ

ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಕ್ಕೆ ಇಂಗ್ಲಿಷ್ ಅನಿವಾರ್ಯ: ಜಿ.ಡಿ.ಹರೀಶ್‌ ಗೌಡ

ಡಿ. 30 ರಂದು ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

Leave a Comment