NEWS

ಸಾರ್ವಜನಿಕ ಅಭಿಪ್ರಾಯ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ

ಪಾಲನೆ ನ್ಯೂಸ್

ಬೆಂಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಪ್ರಕರಣ 5(1) ರಂತೆ ನಿಗಧಿಪಡಿಸಿಲಾಗಿರುತ್ತದೆ. ಈ ವಿವರಗಳನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ವೆಬ್ ಸೈಟ್ ನಲ್ಲಿ https://rdpr.karnataka.gov.in/rdc/public. ಮತ್ತು ದಿನಾಂಕ: 18.04.2026 ರ ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ (ರಾಜ್ಯ ಪತ್ರದ ವಿಳಾಸ “https://erajyapatra.karnataka.gov.in ) ಪ್ರಕಟಿಸಲಾಗಿರುತ್ತದೆ.

ಪ್ರಚಾರ ನೀಡಲು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಂಬಂಧಪಟ್ಟ ವಿಶೇಷ ರಾಜ್ಯಪತ್ರದ ಪ್ರತಿಯನ್ನು ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಿ ಸಾರ್ವಜನಿಕ ಅಭಿಪ್ರಾಯ / ಆಕ್ಷೇಪಣೆಗಳನ್ನು ಆನ್‌ಲೈನ್ ಮುಖಾಂತರ ಆಯೋಗದ ವೆಬ್‌ಸೈಟ್‌ನಲ್ಲಿ ಮತ್ತು ಖುದ್ದಾಗಿ ಅಂಚೆ ಮೂಲಕ ಬೆಂಗಳೂರಿನ ಆಯೋಗದ ಕಛೇರಿಯಲ್ಲಿ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಬೆಂಗಳೂರು ರವರ ಪತ್ರದ ಸಂಖ್ಯೆ:ಕಪಂರಾಸೀನಿಆ/44/ಪಪ್ರ/2022, ದಿ:18.04.2026 ಮತ್ತು ದಿ:21.04.2026 ರಲ್ಲಿ ಪ್ರಕಟಿಸಿರುವ ಪ್ರಕಟಣೆಯ ಕುರಿತಂತೆ ಏಪ್ರಿಲ್ 24 ರೊಳಗಾಗಿ ಆಕ್ಷೇಪಣಿ ಮತ್ತು ಅಹವಾಲುಗಳನ್ನು ಸಲ್ಲಿಸಿರುವವರಿಗೆ ಏಪ್ರಿಲ್ 27 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್ -ನಂ-2, 2ನೇ ಮಹಡಿ ಕೊಠಡಿ ಸಂಖ್ಯೆ: 229 ಮತ್ತು 230, ಬಹುಮಹಡಿಗಳ ಕಟ್ಟಡ, ಬೆಂಗಳೂರು ಇಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಸಮಾರಂಭದಲ್ಲಿ ಜಗದ್ ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು

ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ.

Leave a Comment