NEWS

ಮಂಡ್ಯ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಪಾಲನೆ ನ್ಯೂಸ್

ಮಂಡ್ಯ : ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಇಂದು ಮಂಡ್ಯ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಕಡತಗಳ ವಿಲೇವಾರಿ, ಸಾರ್ವಜನಿಕರ ಅರ್ಜಿಗಳ ಪರಿಶೀಲನೆ, ಹಾಜರಾತಿ ಮತ್ತು ಕಚೇರಿಯ ಸ್ವಚ್ಛತೆಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸರ್ಕಾರಿ ಕೆಲಸಗಳಿಗೆ ಅನಗತ್ಯವಾಗಿ ಅಲೆದಾಡಿಸದಂತೆ ಸಾರ್ವಜನಿಕರಿಗೆ ತ್ವರಿತ ಸೇವೆ ನೀಡಲು ಮತ್ತು ಕೆಲಸಗಳನ್ನು ವಿಳಂಬ ಮಾಡದಂತೆ ತಹಶೀಲ್ದಾರ್ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಮಾಂಡವ್ಯ ಎಕ್ಸಲೆನ್ಸ್: ಸಂಜನಾ ಕೆ.ವೈ. ರಾಜ್ಯಕ್ಕೇ 7ನೇ ಸ್ಥಾನ, ದೀಕ್ಷ ಯು. ರಾಜ್ಯಕ್ಕೇ 10ನೇ ಸ್ಥಾನ

60 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಮಂಡ್ಯ ಅಬಕಾರಿ ಡಿಸಿ ಅಮಾನತ್ತು

Leave a Comment