NEWS

ಯುಎಇನಲ್ಲಿ 3 ಭಾರತೀಯರಿಗೆ ಗಾಯ

ಪಾಲನೆ ನ್ಯೂಸ್

ನವದೆಹಲಿ: ಅರಬ್ ಸಂಯುಕ್ತ ಸಂಸ್ಥಾನದ ಬಂದರಿನ ಪುಜೈರಾ‌ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ನಡೆಸಿದ ಡೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿರುವ ಪ್ರಕರಣವನ್ನು ಭಾರತ ಮಂಗಳವಾರ ಬಲವಾಗಿ ಖಂಡಿಸಿದೆ. ಘಟನೆಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಜನವಸತಿ ಪ್ರದೇಶ, ಮೂಲಭೂತ ಸೌಕರ್ಯಗಳ ಮೇಲಿನ ದಾಳಿಯನ್ನು ಸಹಿಸಲ್ಲ ಎಂದು ಎಚ್ಚರಿಸಿದ್ದಾರೆ. ಮಧ್ಯ ಪ್ರಾಚ್ಯದಲ್ಲಿನ ಕದನ ವಿರಾಮದ ನಂತರ ಅಮೆರಿಕದ ಮಿತ್ರ ದೇಶ ಯುಎಇ ಮೇಲೆ ನಡೆದ ಮೊದಲ ದಾಳಿ ಇದಾಗಿದೆ.

ಇರಾನ್ ಆಕ್ರಮಣ ಮೂರು ಭಾರತೀಯರು ಗಾಯಗೊಳ್ಳಲು ಕಾರಣವಾಗಿದೆ. ಇಂಥ ಆಕ್ರಮಣಗಳನ್ನು ಹಾಗೂ ನಾಗರಿಕ ಮೂಲಸೌಕರ್ಯ ಮತ್ತು ಮುಗ್ಧ ನಾಗರಿಕರನ್ನು ಗುರಿ ಮಾಡಿದ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ಸಚಿವಾಲಯದ ವಕ್ತಾರ ರಣಧೀ‌ರ್ ಜೈಸ್ವಾಲ್ ಒತ್ತಾಯಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಿ ಶಾಂತಿ ಮತ್ತು ಸ್ಥಿರತೆ ಸ್ಥಾಪಿಸಲು ಮಾತುಕತೆ ಹಾಗೂ ರಾಜತಾಂತ್ರಿಕತೆಯೇ ಸರಿಯಾದ ಮಾರ್ಗವೆನ್ನುವುದನ್ನು ಭಾರತ ಈಗಲೂ ಪ್ರತಿಪಾದಿಸುತ್ತದೆ ಎಂದು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜೈಸ್ವಾಲ್‌ ಹೇಳಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನಗರಾಭಿವೃದ್ಧಿ ಇಲಾಖೆ ಯೋಜನೆಗಳ ಸಮಗ್ರ ಪ್ರಗತಿ ಪರಿಶೀಲನೆ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಭೆ

ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಮೂಲಕ ಮಹಿಳೆಯರು ಉದ್ಯೋಗ ಸೃಷ್ಟಿಕರ್ತರಾಗಲಿ

ಯುವ ಜನತೆ ಅಂಬಿಗರ ಚೌಡಯ್ಯ ರವರ ನಡೆ-ನುಡಿ ಜ್ಞಾನವನ್ನು ಪರಿಪೂರ್ಣವಾಗಿ ಅಳವಡಿಸಿಕೊಳ್ಳಬೇಕು

Leave a Comment