NEWS

ಮೇಲುಕೋಟೆಗೆ ಹರಿದು ಬಂದ ಭಕ್ತ ಸಾಗರ

ಹೊಸ ವರ್ಷಾರಂಭದ ಮೊದಲ ದಿನ ದೇವರ ದರ್ಶನ, ಮೊಳಗಿದ ಗೋವಿಂದ ಜಯಘೋಷ

ಪಾಲನೆ ನ್ಯೂಸ್

ಮಂಡ್ಯ: ಹೊಸ ವರ್ಷಾರಂಭದ ಮೊದಲ ದಿನವಾದ ಗುರುವಾರ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಹಾಗೂ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಭಕ್ತರು ಗೋವಿಂದ ಗೋವಿಂದ ಜಯಘೋಷ ಕೂಗುತ್ತಾ ದೇವರ ದರ್ಶನ ಪಡೆದರು.

ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಸಂಖ್ಯೆಯ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಸಂಖ್ಯೆಯ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಮುಂಜಾನೆಯಿಂದಲೇ ಪಂಚ ಕಲ್ಯಾಣಿಯಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ಕಲ್ಯಾಣಿ ದೇವಿಗೆ ಪೂಜೆ ಸಲ್ಲಿಸಿ, ದೇವಾಲಯಕ್ಕೆ ತೆರಳಿದರು.

ಸನ್ನಿಧಿಗಳಲ್ಲಿ ಧನುರ್ಮಾಸದ ನಿಮಿತ್ತ ಸುರ್ಯೋದಯಕ್ಕೂ ಮುನ್ನ ಪೂಜೆ ಕೈಂಕರ್ಯ ಆರಂಭವಾಗಿತ್ತು. ವಿವಿಧ ಬಗೆಯ ಪುಪ್ಪಗಳಿಂದ ಕಂಗೊಳಿಸುತ್ತಿದ್ದ ಚೆಲುವನಾರಾಯಣ ಸ್ವಾಮಿಯ ದರ್ಶನಕ್ಕೆ ಸುಡುಬಿಸಿಲು ಲೆಕ್ಕಿಸದೆ ದೇವಾಲಯ ಮುಂದೆ ಸರತಿ ಸಾಲಿನಲ್ಲಿ ನಿಂತು. ಗೋವಿಂದ ಗೋವಿಂದ ಜಯಘೋಷ ಕೂಗುತ್ತಾ ದೇವರ ದರ್ಶನ ಪಡೆದರು.

ಯೋಗಾನರಸಿಂಹ ಸ್ವಾಮಿ ಬೆಟ್ಟವನ್ನು ಸಾವಿರಾರು ಭಕ್ತರು ಬೆಟ್ಟಹತ್ತಿ ದೇವರ ದರ್ಶನ ಪಡೆದರು.

ರಾಯಗೋಪುರ, ಅಕ್ಕತಂಗಿಕೊಳ, ಧನುಷ್ ಕೋಟಿ, ತೊಟ್ಟಿಲುಮಡು, ಪಂಚಕಲ್ಯಾಣಿ ಸೇರಿ ವಿವಿಧ ಪ್ರವಾಸಿ ತಾಣಗಳು ರಾತ್ರಿಯವರೆಗೂ ಪ್ರವಾಸಿಗರಿಂದ ತುಂಬಿ ತುಳುಕಿದವು. ಇಲ್ಲಿನ ತಾಣಗಳ ಸೌಂದರ್ಯಕ್ಕೆ ಪ್ರವಾಸಿಗರು ಮನಸೋತರು. ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾರು, ಬೈಕ್‌ಗಳಲ್ಲಿ ಆಗಮಿಸಿ ದೇವರ ದರ್ಶನ ಪಡೆದರು.

ಚೆಲುವನಾರಾಯಣ ಸ್ವಾಮಿ ಮೂಲ ಮೂರ್ತಿ

ಉತ್ಸವ ಮೂರ್ತಿ

Related posts

ಪುನೀತ್‌ರಾಜ್‌ಕುಮಾರ್‌ರವರ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! – ರಾಘವೇಂದ್ರ ಅಡಿಗ ಎಚ್ಚೆನ್.

ಬೆಳ್ಳಿ ಗೆದ್ದ ಮೊದಲ ಭಾರತೀಯ ಕನ್ನಡಿಗ ಆಯುಶ್‌

Leave a Comment