NEWS

ನಿಮಿಷಾಂಬ ದೇವಸ್ಥಾನ; ಪೂಜಾ ಕಾರ್ಯಕ್ರಮಕ್ಕೆ ; ಸೂಕ್ತ ಭದ್ರತೆಗೆ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಸೂಚಿಸಿದರು

ಫೆ.1 ರಂದು ನಿಮಿಷಾಂಬ ದೇವಸ್ಥಾನದಲ್ಲಿ ಜರುಗಲಿರುವ ಮಾಘ ಶುದ್ಧ ಪೌರ್ಣಮಿಯಂದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಿ ನದಿಯ ತೀರದಲ್ಲಿನ ಸೂಕ್ತ ಭದ್ರತೆ ಒದಗಿಸಿ – ಎ.ಬಿ ರಮೇಶ ಬಂಡಿಸಿದ್ದೇಗೌಡ ಸೂಚಿಸಿದರು

ಪಾಲನೆ ನ್ಯೂಸ್

    ಮಂಡ್ಯ: ಶ್ರೀರಂಗಪಟ್ಟಣ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆಬ್ರವರಿ 1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರಿಗೆ ಸೇರುವ ಸಾಧ್ಯತೆ ಇದ್ದು ಸದರಿ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ,

    ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಘ ಶುದ್ಧ ಪೌರ್ಣಮಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಶುದ್ಧ ಹುಣ್ಣಿಮೆಯ ಪ್ರಯುಕ್ತ ನಿಮಿಷಾಂಬ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿದ್ದು ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವ ನಿರೀಕ್ಷೆಯಲ್ಲಿ ಇರುವುದರಿಂದ ಕ್ಷೇತ್ರದಲ್ಲಿ ಸೂಕ್ತ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಭಕ್ತಾದಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

    ದೇವಸ್ಥಾನಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆಯಗದಂತೆ ಮೊಜೊ ಬ್ಯಾರಿಕೆಡ್ ಹಾಕಿಸಿ ಹಾಗೂ ದೇವರ ದರ್ಶನಕ್ಕೆ ಬ್ಯಾರಿಕೇಡ್ ಅಳವಡಿಸಿ ಭಕ್ತಾದಿಗಳು ಸರಾಗವಾಗಿ ದೇವರ ದರ್ಶನ ಪಡೆಯುವಂತೆ ಕ್ರಮ ವಹಿಸಿ. ಕಾವೇರಿ ನದಿಯಲ್ಲಿ ಸ್ನಾನ ಮಾಡಿದ ನಂತರ ಭಕ್ತಾದಿಗಳು ಬಟ್ಟೆ ಬದಲಾಯಿಸಲು ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಕೋಣೆ ತೆರೆಯಬೇಕು ಹಾಗೂ ಮಹಿಳೆಯರು ಬಟ್ಟೆ ಬದಲಾಯಿಸುವ ಸ್ಥಳದಲ್ಲಿ ಮಹಿಳಾ ಪೋಲಿಸ್ ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

    ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಕಣ್ಗಾವಲು
    ಮಾಘ ಶುದ್ಧ ಪೌರ್ಣಮಿಯ ದಿನದಂದು ನಿಮಿಷಾಂಬ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದರಿಂದ ಭಕ್ತಾದಿಗಳ ಭದ್ರತಾ ದೃಷ್ಟಿಯಿಂದ ಕಾವೇರಿ ನದಿ ಭಕ್ತಾದಿಗಳು ಮುಳುಗು ಕಡೆ ಹಾಗೂ ನಿಮಿಷಾಂಬ ದೇವಾಲಯದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿಟಿವಿ ಗಳನ್ನು ಅಳವಡಿಸಿ ಎಂದು ತಿಳಿಸಿದರು.

    ದೇವಾಲಯದ ಸುತ್ತಲೂ ದೀಪಾಲಂಕಾರ
    ಮಾಘ ಶುದ್ಧ ಪೌರ್ಣಮಿಯ ದಿನದಂದು ನಿಮಿಷಾಂಬ ದೇವಸ್ಥಾನದ ಸುತ್ತಲೂ ಸೂಕ್ತ ದೀಪಾಲಂಕಾರಗಳ ವ್ಯವಸ್ಥೆ ಕಲ್ಪಿಸಿ. ರಾತ್ರಿಯ ವೇಳೆಯೂ ಭಕ್ತಾದಿಗಳು ದೇವಾಲಯಕ್ಕೆ ಬರುವುದರಿಂದ ಬೆಳಕಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಹಾಗೂ ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ನೀಡಬೇಕು. ತುರ್ತು ಸಂದರ್ಭದಲ್ಲಿ ಜನರೇಟರ್ ಅನ್ನು ಇಟ್ಟಿರಬೇಕು ಎಂದು ಹೇಳಿದರು.

    ತುರ್ತು ಸೇವೆಗಳು
    ಫೆಬ್ರವರಿ 1 ರಂದು ಹೆಚ್ಚು ಭಕ್ತಾದಿಗಳು ಸೇರುವುದರಿಂದ ತುರ್ತು ಸೇವೆಗಳನ್ನು ಒದಗಿಸಬೇಕು. ದೇವಸ್ಥಾನದ ಸಮೀಪದಲ್ಲಿಯೇ ಅಗ್ನಿಶಾಮಕ ದಳ, ಅಗತ್ಯ ಔಷಧಿಗಳೊಂದಿಗೆ ತಾತ್ಕಾಲಿಕ ಆರೋಗ್ಯ ಕೇಂದ್ರ ಮತ್ತು ಆಂಬುಲೆನ್ಸ್ ಸೇವೆ, ಹಾಗೂ ಭಕ್ತಾದಿಗಳು ಸ್ನಾನ ಮಾಡುವ ಸ್ಥಳದಲ್ಲಿ ನುರಿತ ಈಜುಗಾರರ ತಂಡ ಸಿದ್ಧವಾಗಿರಬೇಕು ಎಂದು ಸೂಚಿಸಿದರು.

    ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ ದೇವಾಲಯಕ್ಕೆ ಬರುವ ಭಕ್ತಾದಿಗಳ ವಾಹನಗಳನ್ನು ದೇವಸ್ಥಾನದ ಹತ್ತಿರಕ್ಕೆ ಬಿಡದೆ ನಿಗದಿತ ದೂರದಲ್ಲಿ ಸೂಕ್ತ ಸ್ಥಳ ಗುರುತಿಸಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಭಕ್ತಾದಿಗಳ ನೂಕು ನುಗ್ಗಲು ತಪ್ಪಿಸಲು ಅಗತ್ಯ ಬ್ಯಾರಿಕೇಡ್ ವ್ಯವಸ್ಥೆಯನ್ನು ಮಾಡಬೇಕು. ವಾಹನಗಳಿಗೆ ಮಾರ್ಗ ಸೂಚನಾ ಫಲಕ ಪಾರ್ಕಿಂಗ್ ಫಲಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

    ನಗರದ ಪ್ರಮುಖ ಸ್ಥಳಗಳನ್ನು ಗುರುತಿಸಿ ರಾತ್ರಿ ವೇಳೆಯಲ್ಲಿ ವಿದ್ಯುತ್ ದೀಪಾಲಂಕಾರ (ಲೈಟಿಂಗ್ ) ವ್ಯವಸ್ಥೆಯನ್ನು ಮಾಡುವಂತೆ ಹಾಗೂ ನಿರಂತರವಾಗಿ ವಿದ್ಯುತ್ ವ್ಯವಸ್ಥೆ ಮಾಡಬೇಕು ಹಾಗೂ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು ಮತ್ತು ತಾತ್ಕಾಲಿಕ ಬಯೋ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ಹೇಳಿದರು.

    ದೇವಸ್ಥಾನದ ಆವರಣದಲ್ಲಿ ಹಾಗೂ ಸುತ್ತಮುತ್ತಲು ಹಾಗೂ ಸ್ನಾನ ಮಾಡುವ ಕೊಳದ ಬಳಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ದೇವಾಲಯದ ಆವರಣದಲ್ಲಿ ಸ್ವಚ್ಚತೆ ಕಾಪಾಡಲು ಅಗತ್ಯ ಪೌರ ಕಾರ್ಮಿಕರನ್ನು ನೇಮಿಸಬೇಕು ಎಂದು ತಿಳಿಸಿದರು.

    ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ವಿ ಜೆ ಅವರು ಮಾತನಾಡಿ ನಿಮಿಷಾಂಬ ದೇವಾಲಯಕ್ಕೆ ಭಕ್ತಾದಿಗಳು ಬರಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಶ್ರೀರಂಗಪಟ್ಟಣದಿಂದ ಗಂಜಾಂ ವರೆಗೆ ನಿಗದಿತ ಅವಧಿಯೊಳಗೆ ಬಸ್ ಗಳು ಸಂಚಾರ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ದೇವಸ್ಥಾನ ಆವರಣದಲ್ಲಿ ಧೂಳನ್ನು ನಿಯಂತ್ರಿಸಲು ಟ್ಯಾಂಕರ್ ಮೂಲಕ ನೀರನ್ನು ಸಿಂಪಡಿಸಬೇಕು ಎಂದು ಹೇಳಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನ ಯಾದವ್, ಮುಜರಾಯಿ ಇಲಾಖೆಯ ತಹಶೀಲ್ದಾರ್ ತಮ್ಮೆಗೌಡ, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ರವಿ ಶಂಕರ್, ನಿಮಿಷಾಂಬ ದೇವಾಲಯದ ಆಡಳಿತ ವರ್ಗದ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಕೆಲಸ ಯಾವುದೇ ಆದರೂ ಸರಿ ಎಲ್ಲರೂ ಶಿಕ್ಷಣ ಪಡೆಯುವುದು ಕಡ್ಡಾಯವಾಗಿರಬೇಕು: ಗಂಗಾಧರಸ್ವಾಮಿ

    ಬಾಲ್ಯ ವಿವಾಹವು ಒಂದು ಸಾಮಾಜಿಕ ಪಿಡುಗು: ಡಾ. ಕುಮಾರ

    ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು

    Leave a Comment