NEWS

ಬೂದನೂರು ಉತ್ಸವ 2026ರಲ್ಲಿ ಹೆಲಿ ಟೂರಿಸಂ ಆಯೋಜನೆ ಮಾಡುವ ಪ್ರಯುಕ್ತ ಸ್ಥಳ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ : ಫೆಬ್ರವರಿ 21,22ರಂದು ನಡೆಯಲಿರುವ ಬೂದನೂರು ಉತ್ಸವ 2026 ರಲ್ಲಿ ಸದರಿ ವರ್ಷ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದೆ.

ಫೆಬ್ರವರಿ 20 ರಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ಬೂದನೂರಿನಲ್ಲಿ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಹೆಲಿಕಾಪ್ಟರ್ ಮೂಲಕ ಬೂದನೂರು ಉತ್ಸವವನ್ನು ಕಣ್ಣುಂಬಿಕೊಳ್ಳಬಹುದು. ಈ ನಿಟ್ಟಿನಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಇಂದು ಬೂದನೂರಿನ ಅಮರಾವತಿ ಬಳಿ ಹೆಲಿಕಾಪ್ಟರ್ ನಿಲ್ಲುವ ಸ್ಥಳವನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ವಿದ್ಯಾರ್ಥಿ ಸಂಘದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಪದ್ಮಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರಿಗೆ ಜಿಲ್ಲಾಧಿಕಾರಿ ಸನ್ಮಾನ

ಸಮ ಸಮಾಜದ ಕನಸು ಬಿತ್ತಿದರು ಸಂತ ಕವಿ ಸರ್ವಜ್ಞ: ಬಿ.ಪಿ ಪ್ರಕಾಶ್

Leave a Comment