ಪಾಲನೆ ನ್ಯೂಸ್

ಮಂಡ್ಯ: ಬುದನೂರು ಉತ್ಸವದ ಸಂದರ್ಭದಲ್ಲಿ ಹೇಲಿ ಟೂರಿಸಂ ಸೇವೆ ಆರಂಭಿಸುವ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳು ಮಂಡ್ಯ ಅವರು ದಿನಾಂಕ 04-02-2026 ರಂದು ಬೆಳಿಗ್ಗೆ 11.30 ಗಂಟೆಗೆ ಮಂಡ್ಯ ತಾಲೂಕಿನ ಚಿಕ್ಕ ಮಂಡ್ಯದಲ್ಲಿ ಸಂಬಂಧಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಭದ್ರತೆ, ಸಾರ್ವಜನಿಕ ಸುರಕ್ಷತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಮಾರ್ಗಸೂಚಿಗಳನ್ನು ನೀಡಿದರು. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
