NEWS

60 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಮಂಡ್ಯ ಅಬಕಾರಿ ಡಿಸಿ ಅಮಾನತ್ತು

ಸಿಎಲ್ 7 ಲೈಸೆನ್ಸ್‌ಗೆ 60 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಅಧಿಕಾರಿ

ಪಾಲನೆ ನ್ಯೂಸ್

ಮಂಡ್ಯ: ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಅವರನ್ನು ಅಮಾನತ್ತು ಮಾಡಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯ ದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ.

ಸಿಎಲ್ 7 ಲೈಸೆನ್ಸ್ ನೀಡಲು ಕೆ.ಆ‌ರ್.ಪೇಟೆ ತಾಲ್ಲೂಕಿನ ಸೋಮನಹಳ್ಳಿಯ ಸುಂದರ್ ಎಂಬವರಿಂದ 60 ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದ ಹಿನ್ನೆಲೆಯಲ್ಲಿ ಲೈಸೆನ್ಸ್‌ ನೀಡದೆ ಸಣ್ಣಪುಟ್ಟ ನೆಪ ಹೇಳಿ ಪದೇ ಪದೇ ವಜಾ ಮಾಡುತ್ತಲೇ ಬಂದಿದ್ದರು.

ಲೈಸೆನ್ಸ್ ನೀಡುವಂತೆ ನ್ಯಾಯಾಲಯ ಆದೇಶ ನೀಡಿದ್ದರೂ ಲೈಸೆನ್ಸ್‌ ನೀಡಿರಲಿಲ್ಲ. ಲೈಸೆನ್ಸ್ ನೀಡಲು 60 ಲಕ್ಷ ರೂ. ಲಂಚಕ್ಕೆ ನಾಗಶಯನ ಅವರು ಬೇಡಿಕೆ ಇಟ್ಟಿರುವುದು ಆಡಿಯೋ ಸಹಿತ ಸುಂದರ್ ಅವರು ದೂರು ನೀಡಿ ನ್ಯಾಯಕ್ಕಾಗಿ ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿದ್ದರು. ಇದೇ ವಿಚಾರ ಸದನದಲ್ಲೂ ಚರ್ಚೆಯಾಗಿತ್ತು.

ಈ ವಿಚಾರವಾಗಿ ಮಂಗಳವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶನದಲ್ಲೂ ಚರ್ಚೆಯಾದ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ, ನಾಗಶಯನ ಅವರನ್ನು ಅಮಾನತ್ತು ಮಾಡು ವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್. ಕೊರಡೆ ಅವರು ಅಮಾನತ್ತು ಮಾಡಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಅಮರನಾಥ ಗುಹಾಂತರ ದೇವಾಲಯಕ್ಕೆ ವಾರ್ಷಿಕ ತೀರ್ಥಯಾತ್ರೆ ಜುಲೈ 3 ಆರಂಭ

ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ

ಬೂದನೂರು ಉತ್ಸವದಲ್ಲಿ ಹೆಲಿಟೂರಿಸಂಗೆ ಚಾಲನೆ

Leave a Comment