NEWS

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಸಿ

ಸಿಸಿಟಿವಿ ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ – ಡಾ.ಕುಮಾರ

ಪಾಲನೆ ನ್ಯೂಸ್

ಫೆಬ್ರವರಿ 28 ರಿಂದ ಮಾರ್ಚ್ 17 ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ಗಂಟೆಯಿಂದ 1 ಗಂಟೆಯವರೆಗೂ ನಡೆಯಲಿದ್ದು ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಮಂಡ್ಯ: ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಿಯುಸಿ ಪರೀಕ್ಷೆ -1 ಅನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸದರಿ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 14187 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು 1096 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

27 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನಾ ಪತ್ರಿಕೆಯನ್ನು ತ್ರಿಸದಸ್ಯ ಸಮಿತಿಯಿಂದ ದೂರದ ಪರೀಕ್ಷಾ ಕೇಂದ್ರಗಳಾದ ಕೆ.ಆರ್ ಪೇಟೆ, ನಾಗಮಂಗಲ, ಪಾಂಡವಪುರಕ್ಕೆ ಮುಂಚಿತವಾಗಿ ತಲುಪಿಸಲಾಗುತ್ತದೆ. ಪ್ರಶ್ನಾ ಪತ್ರಿಕೆಯನ್ನು ಸಾಗಿಸುವಾಗ ಬೀಗಿ ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಶ್ನಾ ಪತ್ರಿಕೆ ಸಾಗುವ ಮಾರ್ಗದಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನಾ ಪತ್ರಿಕೆ ಸಾಗಿಸುವ ವಾಹನಗಳಲ್ಲಿಗೆ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು 10 ಜನ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಿಸಿಟಿವಿ ಕಣ್ಗಾವಲು
ದ್ವಿತೀಯ ಪಿಯುಸಿ ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು ಒಟ್ಟು 580 ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಈಗಾಗಲೇ ಅಳವಡಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಕಡ್ಡಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗುತ್ತದೆ ಕ್ರಮ ವಹಿಸಬೇಕು. ಪರೀಕ್ಷೆ ನಡೆಯುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ
ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ಜೊತೆಗೆ ಮೂಲ ಭೂತ ಸೌಕರ್ಯಗಳನ್ನು ಕಲ್ಪಿಸಿ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಗ್ರಾಮೀಣ ಭಾಗದಿಂದ ಮಕ್ಕಳು ಬರುವುದರಿಂದ ಬಸ್ ಗಳು ಪರೀಕ್ಷಾ ದಿನದಂದು ವಿಳಂಬವಾಗದಂತೆ ಕ್ರಮ ವಹಿಸಿ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್ ಗಳನ್ನು ಕೊಠಡಿಗೆ ತರಲು ಬೀಡಬೇಡಿ. ಪರೀಕ್ಷೆ ಮೇಲ್ವಿಚಾರಣೆಗೆ ನೇಮಿಸಿರುವ ಶಿಕ್ಷಕರು ಮಾರ್ಗ ಸೂಚಿಗೆ ಬದ್ಧರಾಗಿ ಕರ್ತವ್ಯ ಪಾಲಿಸಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಚಿತ್ರೀಕರಣ ಮಾಡಲು ಯಾರಿಗೂ ಅನುಮತಿ ನೀಡಬಾರದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ ಚಲುವಯ್ಯ, ತಹಶೀಲ್ದಾರ್ ಗಳಾದ ವಿಶ್ವನಾಥ, ಆದರ್ಶ್, ಅಶೋಕ್, ಚೇತನ ಯಾದವ್, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಜಿಲ್ಲಾಧಿಕಾರಿ

ಗಿಲ್ಲಿ ನಟನಿಗೆ ತವರಿನ ಸ್ವಾಗತ

ಇಲಾಖೆಯಿಂದಲೇ ಮಂಡ್ಯದಲ್ಲಿ ಕೈಗಾರಿಕೆ

Leave a Comment