NEWS

ಇರಾನ್‌ನ ನಾಯಕ ಅಯತ್ತೊಲ್ಲಾ ಅಲಿ ಖಮೇನಿ ಸಾವಿಗೆ ಭಾರತ ಸಂತಾಪ

ಪಾಲನೆ ನ್ಯೂಸ್

ಹೊಸದಿಲ್ಲಿ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಭಾರತ ವಿಳಂಬವಾಗಿ ಸಂತಾಪ ವ್ಯಕ್ತಪಡಿಸಿದೆ. ಖಮೇನಿ ಹತ್ಯೆ ಬಗ್ಗೆ ಮೌನವಹಿಸಿದ್ದ ಪ್ರಧಾನಿ ಮೋದಿ ವಿರುದ್ದ ವಿಪಕ್ಷಗಳಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸಂತಾಪ ಸೂಚಿಸಿದೆ. ಕೇಂದ್ರ ಸರ್ಕಾರದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ಅವರು ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಹಾಕಿದ್ದು, ಹತ್ಯೆಗೀಡಾದ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೆ ಸಂತಾಪ ಸೂಚಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವಿಧಾನಸೌಧದಲ್ಲಿ ನಾಪತ್ತೆಯಾದ ಹಣ, ಆಭರಣ

ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು

ಸಾರ್ವಜನಿಕ ಸೋಮವಾರದಂದು ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳಿಗೂ ಕಡ್ಡಾಯವಾಗಿ ಕ್ರಮವಹಿಸಿ: ಜಿ.ಪಂ. ಸಿಇಒ

Leave a Comment