NEWS

ಏ.8ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೌಲ್ಯಮಾಪನ ಆರಂಭ

ಪಾಲನೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಏಪ್ರಿಲ್ 8ರಿಂದ ನಡೆಯಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಆದರೆ, ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕೃತ ವಿಷಯಗಳ ಮೌಲ್ಯಮಾಪನವು ಏಪ್ರಿಲ್ 9ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಏ.7 ರಂದು ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಏ.8ರಂದು ಸಹಾಯಕ ಮೌಲ್ಯಮಾಪಕರು ಮೌಲ್ಯಮಾಪನ ಕೇಂದ್ರಗಳಿಗೆ ಹಾಜರಾಗಬೇಕು.

ಮೌಲ್ಯಮಾಪಕರ ನೇಮಕಾತಿ ಆದೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ತೃತೀಯ ಭಾಷೆಗಳ ಮೌಲ್ಯಮಾಪಕರು ಏ.8ರಂದು ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಬೇಕಿದೆ. ಮೌಲ್ಯಮಾಪನ ಕಾರ್ಯವು ಶಿಕ್ಷಣ ಕಾಯ್ದೆ ಪ್ರಕಾರ ಕಡ್ಡಾಯವಾಗಿದೆ ಎಂದು ಮಂಡಳಿ ಕಾರ್ಯವು ಶಿಕ್ಷಣ ಕಾಯ್ದೆ ಪಕಾರ ಕಡ್ಡಾಯವಾಗಿದೆ ಮತ್ತು ಎಸ್. ಎಸ್.ಎಲ್.ಸಿ. ಪರೀಕ್ಷೆಯ ನೋಡೆಲ್ ಅಧಿಕಾರಿಗಳು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಮತ್ತು ಮೌಲ್ಯಮಾಪನ ಕಾರ್ಯದ ಉಸ್ತುವಾರಿ ಹಾಗೂ ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಲಾಗಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಗುಂಡ್ಲುಪೇಟೆ, ಮೈಸೂರಿನಲ್ಲಿ ನಾಗರಹೊಳೆ, ಬಂಡಿಪುರ ಸಫಾರಿ ಪುನಾರಂಭಕ್ಕೆ ರೈತರಿಂದ ವಿರೋಧ

ಏಪ್ರಿಲ್ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ : ಬಿ. ಸಿ. ಶಿವಾನಂದಮೂರ್ತಿ

ಆರ್‌ಸಿಬಿ ಪಂದ್ಯ ಬಗ್ಗೆ ಚಿನ್ನಸ್ವಾಮಿಯಲ್ಲಿ ನಾಡಿದ್ದು ಅಂತಿಮ ನಿರ್ಧಾರ?

Leave a Comment